ಸೋಮವಾರಪೇಟೆ, ಸೆ. ೨೩: ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕಾಗಿ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆಯ ಸೇಂಟ್ ಜೋಸೆಫ್ ಪದವಿ ಕಾಲೇಜಿನಲ್ಲಿ ನೆರವೇರಿತು. ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟಿçÃಯ ಕಬಡ್ಡಿ ಆಟಗಾರ ಹಾಗೂ ಅಂತರರಾಷ್ಟಿçÃಯ ಹ್ಯಾಂಡ್‌ಬಾಲ್ ಆಟಗಾರ ಗ್ರೀನಿಡ್ಜ್ ಡಿ. ಕುನ್ಹಾ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಆಟಗಾರರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೆವರೆಂಡ್ ಫಾದರ್ ಅವಿನಾಶ್ ಅವರೊಂದಿಗೆ ಟ್ರಯಲ್ಸ್ ಉದ್ಘಾಟನೆ ನೆರವೇರಿತು.

ಆಯ್ಕೆ ಪ್ರಕ್ರಿಯೆಯ ಮೇಲ್ವಿಚಾರಣೆಗೆ, ಗ್ರೀನಿಡ್ಜ್ ಡಿ. ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಸೋಮವಾರಪೇಟೆಯ ಬಿಟಿಸಿಜಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರುಪ್ರಸಾದ್ ಹಾಗೂ ಆತಿಥೇಯ ಸೇಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಕೆ.ಆರ್. ಅವರನ್ನೊಳಗೊಂಡ ಸಮಿತಿಯು ನೇತೃತ್ವ ವಹಿಸಿತ್ತು.

ಸುಮಾರು ೫೦ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡೆಯಲ್ಲಿ ತಮ್ಮ ತಾಂತ್ರಿಕ ಕೌಶಲ್ಯ, ಶಕ್ತಿ ಮತ್ತು ತಂತ್ರಗಳನ್ನು ಪ್ರದರ್ಶಿಸಿದರು.

ತೀವ್ರ ಸ್ಪರ್ಧಾತ್ಮಕ ವಾತಾವರಣದಲ್ಲಿ ನಡೆದ ಈ ಟ್ರಯಲ್ಸ್ ಮೂಲಕ ಕೊಡಗು ವಿಶ್ವವಿದ್ಯಾಲಯ ತಂಡಕ್ಕೆ ಅರ್ಹ ಆಟಗಾರರನ್ನು ಆರಿಸಲಾಗುವುದು.