ಮಡಿಕೇರಿ, ನ. ೫: ಕೊಡಗು ಮೂಲದ ಯುವಪೀಳಿಗೆ ಮತ್ತೆ ಜಿಲ್ಲೆಗೆ ಮರಳುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಂಬAಧಿತ ಯೋಜನೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯಪಟ್ಟಿದ್ದಾರೆ.
ನಗರದ ಕೊಡಗು ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಕೂರ್ಗ್ ರೆಸಾರ್ಟ್, ಹೊಟೇಲ್ ಅಸೋಸಿಯೇಷನ್ನ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಉದ್ಯೋಗಾವಕಾಶ ಅರಸಿ ಹೊರನಾಡಿಗೆ ತೆÀರಳಿರುವ ಕೊಡಗಿನ ಅನೇಕ ಯುವಕ, ಯುವತಿಯರು ಮತ್ತೆ ಕೊಡಗಿಗೆ ಮರಳಲು ಸ್ಥಳೀಯವಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸಹಕಾರಿಯಾಗಬೇಕು. ಪ್ರವಾಸೋದ್ಯಮಿಗಳಲ್ಲಿ ಪರಸ್ಪರ ಸ್ಪರ್ಧೆಗಿಂತ ಎಲ್ಲಾ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಸುಗಮವಾಗಿರುವಂತೆ ಕಾಯ್ದುಕೊಳ್ಳುವುದು ಮುಖ್ಯವಾಗಬೇಕೆಂದು ಹೇಳಿದರು.
ಕೊಡಗಿನ ಪ್ರವಾಸೋದ್ಯಮಿಗಳು ಜನಸ್ನೇಹಿಯಾಗಿದ್ದಲ್ಲಿ ಒಮ್ಮೆ ಭೇಟಿ ನೀಡಿದ ಪ್ರವಾಸಿಗರು ಮತ್ತೆ ಮತ್ತೆ ಕೊಡಗಿಗೆ ಪ್ರವಾಸ ಬರುವುದು ಖಂಡಿತಾ ಎಂದು ಕಿವಿಮಾತು ಹೇಳಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಕಳೆದ ತಿಂಗಳು ಆಯೋಜಿಸಿದ್ದ ಸ್ವಚ್ಛ ಕೊಡಗು ಸುಂದರ ಕೊಡಗು ಸ್ವಚ್ಛತಾ ಅಭಿಯಾನ ರಾಜ್ಯದ ಗಮನವನ್ನೇ ಸೆಳೆದಿದೆ. ಸ್ವಯಂ ಪ್ರೇರಿತರಾಗಿ ಕೊಡಗಿನ ಜನತೆ ಈ ಅಭಿಯಾನಕ್ಕೆ ಸಹಕಾರ ನೀಡಿದ್ದು, ಜಿಲ್ಲೆಯ ಜನತೆಯಲ್ಲಿ ಸ್ವಚ್ಛ ಕೊಡಗಿನ ಬಗೆಗಿನ ಚಿಂತನೆಗೆ ನಿದರ್ಶನವಾಗಿದೆ ಎಂದು ಶ್ಲಾಘಿಸಿದರು.
ಕೊಡಗನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿಯೂ ಜಿಲ್ಲೆಯ ಜನತೆಯ ಸರ್ವ ಸಹಕಾರವನ್ನೂ ಈ ಸಂದರ್ಭ ಜಿಲ್ಲಾಧಿಕಾರಿಗಳು ಕೋರಿದರು. ಕೊಡಗಿಗೆ ಭೇಟಿ ನೀಡುವ ಪ್ರವಾಸಿರಿಗೆ ಸಾಕಷ್ಟು ಮಾಹಿತಿ ನೀಡುವ ನಿಟ್ಟಿನಲ್ಲಿ ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ನ ಈ ನೂತನ ಕಚೇರಿ ಸಹಕಾರಿಯಾಗಲಿ ಎಂದು ವೆಂಕಟ್ ರಾಜಾ ಆಶಿಸಿದರು.
ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ಪ್ರಥಮ ಬಾರಿಗೆ ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ಗೆ ಪ್ರತ್ಯೇಕ ಕಚೇರಿ ಲಭಿಸುವಂತಾಗಿದೆ. ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಅಸೋಸಿಯೇಷನ್ ಅನೇಕ ಕಾರ್ಯಯೋಜನೆ ರೂಪಿಸುತ್ತಿದ್ದು, ಕೊಡಗು ಉತ್ಸದ ಚಿಂತನೆಯೂ ಇದೆ ಎಂದರು.
ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ನಾಸಿರ್ ಅಹಮ್ಮದ್, ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಬಿ.ಎಸ್. ಸುಂದರ್, ರತೀಶ್, ಬಿ.ಸಿ. ಮಂಜುನಾಥ್, ಜಂಟಿ ಕಾರ್ಯದರ್ಶಿ ಡಿ.ಕೆ. ಮಂಜುನಾಥ್, ಖಜಾಂಚಿ ಸಾಗರ್ ಗಣಪತಿ, ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಗೌರವ ಸಲಹೆಗಾರ ಜಿ. ಚಿದ್ವಿಲಾಸ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.