ಕುಶಾಲನಗರ, ನ. ೭: ಕುಶಾಲನಗರ ಶ್ರೀ ಗಣಪತಿ ರಥೋತ್ಸವ ತಾ. ೮ ರಂದು ಇಂದು ನಡೆಯಲಿದೆ. ಗಣಪತಿ ದೇವಸ್ಥಾನ ವಾರ್ಷಿಕೋತ್ಸವ ಅಂಗವಾಗಿ ಕಾರ್ತಿಕ ಮಾಸ ಬಹುಳ ಚತುರ್ಥಿಯಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇP,À ಪುಷ್ಪಾಲಂಕಾರ, ದೇವರನ್ನು ರಥದಲ್ಲಿ ಕೂರಿಸಿ ಪೂಜೆ ಮಹಾಮಂಗಳಾರತಿ ನೆರವೇರಿಸಲಾಗುವುದು.
ನಂತರ ದೇವಸ್ಥಾನದ ವತಿಯಿಂದ ಮಧ್ಯಾಹ್ನ ೧೨ ಗಂಟೆಗೆ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕುಶಾಲನಗರ ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರಾದ ಎಂ ಕೆ ದಿನೇಶ್ ತಿಳಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಥದಲ್ಲಿ ದೇವರಿಗೆ ಪೂಜೆ ಸಲ್ಲಿಸುವ ಸಂದರ್ಭ ಸರದಿ ಸಾಲಿನಲ್ಲಿ ಬಂದು ಪೂಜೆ ಮಾಡಿಸುವುದು ರಥೋತ್ಸವದ ಅಂಗವಾಗಿ ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೧ ಗಂಟೆಯಿAದ ೪ ಗಂಟೆ ತನಕ ಅನ್ನಸಂತರ್ಪಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಕುಶಾಲನಗರ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ತಾ ೮ರಿಂದ ತಾ. ೧೯ ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜಾತ್ರಾ ಅಂಗವಾಗಿ ಜಾತ್ರಾ ಮೈದಾನದಲ್ಲಿ ಮನೋರಂಜನೆ ಪಾರ್ಕ್ ತಾ. ೨೮ರ ವರೆಗೆ ನಡೆಯುವುದು. ನವಂಬರ್ ೧೨ ರಿಂದ ಜಾತ್ರಾ ಮೈದಾನದಲ್ಲಿ ಎರಡು ದಿನಗಳ ಕಾಲ ಗೋಪ್ರದರ್ಶನ ಮತ್ತು ಉತ್ತಮ ರಾಸುಗಳ ಆಯ್ಕೆ ನಡೆಯಲಿದೆ. ತಾ.೧೪ ರಂದು ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ರಥೋತ್ಸವದ ಸಂದರ್ಭ ರಥ ಬೀದಿಯಲ್ಲಿ ಕುಣಿತ, ಭಜನಾ ತಂಡದಿAದ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ದೇವಾಲಯ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಬೆಳಗ್ಗೆ ಧ್ವಜಾರೋಹಣ, ಪಂಚಾಮೃತ ಅಭಿಷೇಕ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು.
ಇದೇ ಸಂದರ್ಭ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊAದಿಗೆ ಆಗಮಿಸಿ, ಸಾಮೂಹಿಕ ಪೂಜೆ ಸಲ್ಲಿಸಿದರು.
ಈ ಸಂದರ್ಭ ದೇವಾಲಯ ಕಾರ್ಯಕಾರಿ ಮಂಡಳಿ ಗೌರವ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಖಜಾಂಚಿ ಎಸ್.ಕೆ. ಸತೀಶ್ ಸಹ ಕಾರ್ಯದರ್ಶಿ ಕೆ.ಎಂ. ದೇವರಾಜು, ನಿರ್ದೇಶಕರಾದ ಹೆಚ್.ಎಂ. ಚಂದ್ರು, ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು, ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಮತ್ತಿತರರು ಇದ್ದರು.