ಮಡಿಕೇರಿ, ಡಿ. ೧೭: ಕೊಡ್ಲಿಪೇಟೆ ಖ್ಯಾತೆ ಗ್ರಾಮದಲ್ಲಿನ ಡಾ.ಎ.ಪಿ.ಜೆ. ಅಬ್ದುಲ್ಕಲಾಂ ಅಲ್ಪಸಂಖ್ಯಾತ ವಸತಿ ನಿಲಯದಲ್ಲಿನ ಅವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಬಹಿರಂಗಪಡಿಸಿದ್ದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರ ಬಗ್ಗೆ ನಿಂದನೆಯ ರೀತಿಯಲ್ಲಿ ಮಾಧ್ಯಮ ಹೇಳಿಕೆ ನೀಡಿದ್ದ ಸಂಬAಧಿಸಿದ ಇಲಾಖೆಯ ಜಿಲ್ಲಾ ಅಧಿಕಾರಿ ಕೃಷ್ಣಮೂರ್ತಿ ಆರ್. ಅವರನ್ನು ಸರಕಾರ ಅಮಾನತುಗೊಳಿಸಿ ಆದೇಶ ನೀಡಿದೆ.
ಅಧಿಕಾರಿ ಕೃಷ್ಣಮೂರ್ತಿ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ಸುಜಾ ಕುಶಾಲಪ್ಪ ಅವರು ನಿನ್ನೆ ಮೇಲ್ಮನೆಯಲ್ಲಿ ಹಕ್ಕುಚ್ಯುತಿ ಮಂಡಿಸಿದ್ದರು. ಈ ಬಗ್ಗೆ ವಿಪಕ್ಷ ನಾಯಕರಾಗಿರುವ ಛಲವಾದಿ ನಾರಾಯಣ ಸ್ವಾಮಿ ಅವರು ವಿಷಯ ಪ್ರಸ್ತಾಪ ಮಾಡಿ ವಿಧಾನ ಪರಿಷತ್ ಸದಸ್ಯರ ವಿರುದ್ಧ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೃಷ್ಣಮೂರ್ತಿ ಆರ್. ಅವರು ನಿಂದನೆ ಮಾಡುವ ರೀತಿ ಪತ್ರಿಕಾ ಹೇಳಿಕೆ ನೀಡಿರುವುದು ಗಂಭೀರ ವಿಚಾರವಾಗಿದೆ ಎಂದು ಗಮನ ಸೆಳೆದು ಕ್ರಮಕ್ಕೆ ಆಗ್ರಹಿಸಿದ್ದರು.
ಈ ವಿಚಾರವನ್ನು ಸಭಾಪತಿಗಳು ಸದನದ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ್ದರು. ಇದೀಗ ಸುಜಾ ಅವರಿಂದ ಮಂಡನೆಯಾಗಿದ್ದ ಹಕ್ಕುಚ್ಯುತಿಯಂತೆ ಹಕ್ಕು ಬಾಧ್ಯತಾ ಸಮಿತಿ ಮೂಲಕ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಈ ಅಧಿಕಾರಿ ಸದಸ್ಯರನ್ನು ನಿಂದಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಸರಕಾರದ ನಿಯಮ ಉಲ್ಲಂಘನೆಯAತಾಗಿರುವುದರಿAದ ಇವರನ್ನು ತಕ್ಷಣದಿಂದ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಬಗ್ಗೆ ಸರಕಾರದ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಅಧೀನ ಕಾರ್ಯದರ್ಶಿ ಅಲ್ಪಸಂಖ್ಯಾತರ ಕಲ್ಯಾಣ ರಾಜ್ ಮತ್ತು ವಕ್ಫ್ ಇಲಾಖೆಯ ಎಸ್. ಎಜಾನ್ ಪಾಷ ಅವರು ಆದೇಶ ಹೊರಡಿಸಿದ್ದಾರೆ.
ಸುಜಾ ಪ್ರತಿಕ್ರಿಯೆ
ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ಸಿ.ಎಸ್.ಆರ್ ನಿಯಮಗಳನ್ನು ಉಲ್ಲಂಘಿಸಿ, ಸದನದ ಸದಸ್ಯನಾದ ನನ್ನ ವಿರುದ್ಧ ಮಾಧ್ಯಮಗಳಲ್ಲಿ ಕಪೋಲಕಲ್ಪಿತ ಹೇಳಿಕೆಗಳನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ನನ್ನ ಹಕ್ಕಿಗೆ ಚ್ಯುತಿ ಬರುವಂತೆ ವರ್ತಿಸಿರುವುದು ನನಗೆ ನೋವುಂಟಾಗಿದೆ. ಆದ್ದರಿಂದ ಈ ಅಧಿಕಾರಿಯ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡಿದ್ದಾಗಿ ಹೇಳಿದ್ದಾರೆ.