ನಾಪೋಕ್ಲು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಹಯೋಗ ದಲ್ಲಿ ಕಾರುಗುಂದ ಗೌಡ ಸಮಾಜದಲ್ಲಿ ಅರೆಭಾಷೆ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರು ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಭಾಷಣಗಾರರಾಗಿ ಗೌಡ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ತುಂತಜೆ ವೆಂಕಟೇಶ್ (ಗಣೇಶ್) ಅವರು ಮಾತನಾಡಿ ಮಾತೃ ಭಾಷೆ ಉಳಿಯುವುದು ಮಾತೆ ಯಿಂದ ಹಾಗೂ ಮನೆಯಿಂದ. ಪ್ರತಿ ಮನೆಯಲ್ಲೂ ಮಕ್ಕಳಿಗೆ ಮಾತೃ ಭಾಷೆಯನ್ನು ಕಲಿಸಿದಲ್ಲಿ ಭಾಷೆ ಉಳಿಯುವುದು. ಹಾಗೆಯೇ ನಮ್ಮ ಸಂಸ್ಕೃತಿ ಸಂಪ್ರದಾಯವನ್ನೂ ಕೈಬಿಡಬಾರದು ಎಂದು ಕಿವಿ ಮಾತು ಹೇಳಿದರು.

ಮತ್ತೊಬ್ಬ ಮುಖ್ಯ ಭಾಷಣಗಾರರಾಗಿ ಶಿಕ್ಷಕಿ ತಳೂರು ಉಷಾ ಕಾಶಿ ಅವರು ಮಾತನಾಡಿ, ಭಾಷೆ, ಸಂಸ್ಕೃತಿಯನ್ನು ಮರೆತರೆ ಆ ಜನಾಂಗವನ್ನು ಮಾರಿಕೊಂಡAತೆ. ಆದ್ದರಿಂದ ಆಯಾ ಜನಾಂಗಕ್ಕೆ ಸಂಬAಧಪಟ್ಟ ಭಾಷೆ, ಉಡುಪು ಪದ್ದತಿ ಪರಂಪರೆಯನ್ನು ಪೋಷಣೆ ಮಾಡಬೇಕು ಎಂದರು. ಪ್ರತಿಯೊಂದು ಸಾಂಪ್ರದಾಯಿಕ ಆಚರಣೆಗಳ ಬಗ್ಗೆ ಯುವ ಜನತೆ ಅರಿತು ಬಾಳಬೇಕು ಇದಕ್ಕಾಗಿ ಸಮಾಜಗಳ ಮೂಲಕ ಕಾರ್ಯಾಗಾರ ನಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಪಾಲು ಗಣಪತಿ ಅವರು, ಮುಂದಿನ ದಿನಗಳಲ್ಲಿ ಇಂತ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಅರೆಭಾಷೆ ಅಕಾಡಮಿ ಸಮಾಜಗಳೊಂದಿಗೆ ಕೈಜೋಡಿಸಿದಲ್ಲಿ ಉತ್ತಮ ಸ್ಪಂದನ ದೊರಕುವುದು ಎಂದರು.

ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷರಾದ ಕೇಕಡ ದಿನೇಶ್, ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹೊಸೊಕ್ಲು ಲತಾ ಮೊಣ್ಣಪ್ಪ, ನಡುವಟ್ಟಿರ ಅನಂತ, ಸಮಾಜದ ನಿರ್ದೇಶಕರು, ಮಹಿಳಾ ಒಕ್ಕೂಟದ ನಿರ್ದೇಶಕರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ಸಿರಕಜೆ ಹಿತ ತೀರ್ಥ ಕುಮಾರ್ ಮತ್ತು ದೇವಾಯಿರ ವಿದ್ಯಾ ವಿನಯ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಮಾಜದ ನಿರ್ದೇಶಕರಾದ ಕೊಡಗನ ತೀರ್ಥಕುಮಾರ್ ಸ್ವಾಗತಿಸಿ, ಮಹಿಳಾ ಒಕ್ಕೂಟದ ಕಾರ್ಯದರ್ಶಿ ಕಾರ್ಯಕ್ರಮ ನಿರ್ವಹಿಸಿ ಕೂಡಕಂಡಿ ಸೋನಿ ಸುದೀಪ್ ವಂದಿಸಿದರು. ಬೈಮನ ಭವಾನಿ ದಿಲೀಪ್ ಅರೆಭಾಷೆ ಗೀತೆ ಹಾಡಿದರು. ಸಿರಕಜೆ ಚಾರ್ವಿ ತಂಡದವರಿAದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.