ಮಡಿಕೇರಿ ಡಿ. ೨೨: ಕೊಡಗಿನ ಮೊಟ್ಟ ಮೊದಲ ಸೌಹಾರ್ದ ಸಹಕಾರಿ ‘ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ’ ಶತಮಾನೋತ್ಸವದ ಸಂಭ್ರಮದಲ್ಲಿದೆ. ಇದರ ಅಂಗವಾಗಿ ತಾ.೨೫ ರಂದು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘದ ಅಧ್ಯಕ್ಷ ಚೇತನ್ ಹೆಚ್.ಎಸ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೌಹಾರ್ದ ಸಹಕಾರಿ ಶತಸಂಭ್ರಮದ ಕಾರ್ಯಕ್ರಮ ಜ.೧೧ ರಂದು ನಗರದ ಗೌಡ ಸಮಾಜದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಶತಮಾನೋತ್ಸವ ಅಂಗವಾಗಿ ತಾ.೨೫ ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ಶಿಕ್ಷಕರಿಗೆ, ಸಂಘದ ಸದಸ್ಯರಿಗೆ ಹಾಗೂ ಕೊಡಗು ಜಿಲ್ಲಾ ಶಿಕ್ಷಣ ಇಲಾಖಾ ನೌಕರರಿಗೆ ಕ್ರೀಡಾಕೂಟ ನಡೆಯಲಿದೆ. ಪುರುಷರಿಗೆ ವಾಲಿಬಾಲ್, ಹಗ್ಗಜಗ್ಗಾಟ, ಕಬಡ್ಡಿ, ಮಹಿಳೆಯರಿಗೆ ಹಗ್ಗ ಜಗ್ಗಾಟ ಮತ್ತು ಥ್ರೋಬಾಲ್. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ೧೦೦ ಮೀಟರ್ ಓಟದ ಸ್ಪರ್ಧೆ, ನಡೆಯುವ ಸ್ಪರ್ಧೆ, ಮ್ಯೂಸಿಕಲ್ ಚೇರ್, ಭಾರದ ಗುಂಡು ಎಸೆತ ಮತ್ತು ವಿಷದ ಚೆಂಡು ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದ್ದು, ಜನಪದ ನೃತ್ಯ(ಗುಂಪು)-೧೦ ಜನಕ್ಕೆ ಮೀರದಂತೆ, ಸಿನಿಮಾ ಹಾಡಿಗೆ ನೃತ್ಯ(ಗುಂಪು)-೧೦ ಜನಕ್ಕೆ ಮೀರದಂತೆ, ಭಾವಗೀತೆ ಮತ್ತು ಜಾನಪದ ಗೀತೆ(ವೈಯಕ್ತಿಕ), ಏಕಾಪಾತ್ರಾಭಿನಯ(ವೈಯಕ್ತಿಕ), ಮಹಿಳೆಯರಿಗೆ ಜನಪದ ಗೀತೆ(ಗುಂಪು), ೧೦ ಮಂದಿ ಮೀರಬಾರದು. ನಿವೃತ್ತ ಶಿಕ್ಷಕರಿಗೆ ಬಕೆಟ್‌ನಲ್ಲಿ ಬಾಲ್ ಹಾಕುವುದು ಮತ್ತು ವಿಷದ ಚೆಂಡು ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಪ್ರತ್ಯೇಕವಾಗಿ ೪ಆರನೇ ಪುಟಕ್ಕೆ

(ಮೊದಲ ಪುಟದಿಂದ) ‘ದೇಶದ ಆರ್ಥಿಕತೆಯ ಬೆಳೆವಣಿಗೆಯಲ್ಲಿ ಸಹಕಾರ ಮತ್ತು ಸೌಹಾರ್ದದ ಪಾತ್ರ’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಭೋಜೇಗೌಡ ಮತ್ತಿತರ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ ಎಂದರು.

ಶತಸAಭ್ರಮ ಭವನ

ಶತಮಾನೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಸಂಘದ ಗುರುಭವನ ಕಟ್ಟಡ ಇರುವ ಜಾಗದಲ್ಲಿ ರೂ.೫ ಕೋಟಿ ವೆಚ್ಚದಲ್ಲಿ ‘ಶತಸಂಭ್ರಮ ಭವನ’ ನಿರ್ಮಾಣಕ್ಕೆ ಜ.೧೧ ರಂದು ಶಿಲಾನ್ಯಾಸ ನೆರವೇರಿಸಲಾಗುವುದು. ಶಿಲಾನ್ಯಾಸ ಮತ್ತು ಶತಸಂಭ್ರಮ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಆಗಮಿಸಲಿದ್ದಾರೆ. ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ರಿಯಾಯಿತಿ ದರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸುವುದು ‘ಶತಸಂಭ್ರಮ ಭವನ’ ನಿರ್ಮಾಣದ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.

ದೂರದೃಷ್ಟಿಯ ಚಿಂತಕ, ನಮ್ಮ ಸಹಕಾರಿಯ ಹರಿಕಾರ ತೇಲಪಂಡ.ಎA ಕಾರ್ಯಪ್ಪ ಅವರ ಪ್ರಯತ್ನದ ಫಲವಾಗಿ ೧೯೨೫ ಜೂ.೨೩ ರಂದು ಸಂಘ ಸ್ಥಾಪನೆಗೊಂಡು ಶಿಕ್ಷಕರ ಬೇಕು ಬೇಡಿಕೆಗಳನ್ನು ಪೂರೈಸುತ್ತಾ ಬಂದಿದೆ. ಶಿಕ್ಷಕರ ಕಲ್ಯಾಣಕ್ಕಾಗಿ ಪ್ರಾರಂಭಗೊAಡ ಸಂಘ ಶತಮಾನೋತ್ಸವದ ಸಂಭ್ರಮದಲ್ಲಿರುವುದು ಕೊಡಗು ಜಿಲ್ಲಾ ಶಿಕ್ಷಣ ಇಲಾಖೆಗೆ ಹಾಗೂ ಶಿಕ್ಷಕರಿಗೆ ಸಂದ ದೊಡ್ಡ ಗೌರವವಾಗಿದೆ ಎಂದು ಚೇತನ್ ಹೆಚ್.ಎಸ್ ಹರ್ಷ ವ್ಯಕ್ತಪಡಿಸಿದರು.

ಸ್ವಯತ್ತತೆ, ಸ್ವಯಂ ನಿಯಂತ್ರಣ, ಸ್ವಯಂ ಆಡಳಿತ ತತ್ವದಡಿ ಕರ್ನಾಟಕ ಸರಕಾರ ಜಾರಿಗೆ ತಂದ ಸೌಹಾರ್ದ ಕಾಯಿದೆಯಡಿ ನೋಂದಣಿಯಾದ ಮೊಟ್ಟಮೊದಲ ಸೌಹಾರ್ದ ಶಿಕ್ಷಕರ ಹೆಮ್ಮೆಯ ಸಂಸ್ಥೆಯಾಗಿ ಬೆಳೆದು ಬಂದಿದೆ. ಮಡಿಕೇರಿ ನಗರದಲ್ಲಿ ೪ ಅಂತಸ್ತಿನ ಕಟ್ಟಡ ಹಾಗೂ ನಗರದ ಹೃದಯಭಾಗದಲ್ಲಿ ೪೨ ಸೆಂಟು ಜಾಗದಲ್ಲಿ ಗುರುಭವನ ಕಟ್ಟಡದೊಂದಿಗೆ ಹೆಮ್ಮರವಾಗಿ ಬೆಳೆದಿರುವ ಸಂಸ್ಥೆ ಇದಾಗಿದೆ. ಸಂಘವು ರೂ.೪೦ ಕೋಟಿ ವ್ಯವಹಾರ ನಡೆಸಿ, ೧೮ ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಸುಮಾರು ೧೫ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ನೀಡುತ್ತಾ ಬರಲಾಗುತ್ತಿದ್ದು, ೨೫ಲಕ್ಷ ರೂ. ಲಾಭವನ್ನು ಹೊಂದಿದೆ. ಶಿಕ್ಷಕರ ಆಶಾಕಿರಣವಾಗಿರುವ ಸಂಘ ಸೇವಾ ಮನೋಭಾವವನ್ನೇ ಗುರಿಯಾಗಿರಿಸಿಕೊಂಡಿದೆ. ಇದೇ ಕಾರಣದಿಂದ ಅತ್ಯಂತ ಕಡಿಮೆ ಬಡ್ಡಿ ದರ ಶೇ.೧೧ ರಂತೆ ಸಾಲವನ್ನು ವಿತರಿಸುತ್ತಿದೆ. ವೈಯುಕ್ತಿಕ ಸಾಲ, ಗೃಹ ಸಾಲ, ವಾಹನ ಸಾಲ, ಚಿನ್ನಾಭರಣ ಸಾಲ ಮತ್ತು ಪಿಗ್ಮಿ ಮೇಲಿನ ಸಾಲ ನೀಡಲಾಗುತ್ತಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಹೆಚ್.ಆರ್.ಮುತ್ತಪ್ಪ, ನಿರ್ದೇಶಕರುಗಳಾದÀ ಪುದಿಯನೆರವನ ರೇವತಿ ರಮೇಶ್, ಹೆಚ್.ಎನ್.ಮಂಜುನಾಥ್, ಟಿ.ಕೆ.ಬಸವರಾಜ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ.ನಟೇಶ ಉಪಸ್ಥಿತರಿದ್ದರು.