ಸಿದ್ದಾಪುರ, ಜ. ೬: ಅಕ್ರಮವಾಗಿ ಹೊರ ರಾಜ್ಯದ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವೀರಾಜಪೇಟೆಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಅಮ್ಮತ್ತಿಯ ಮುತ್ತಪ್ಪ ದೇವಾಲಯದ ಬಳಿ ಸಾರ್ವಜನಿಕರ ರಸ್ತೆಯಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ಕೆ.ಎಸ್. ಅಬ್ರಾಹಂ (ಜೋಯಿ) ಎಂಬಾತನನ್ನು ಬಂಧಿಸಿ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.