ಮಡಿಕೇರಿ, ಜ. ೧೯: ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಶಾಲೆ ಹಾಗೂ ಕಾಲೇಜಿನಲ್ಲಿ ೭೮ನೇ ಭಾರತೀಯ ಸೇನಾ ದಿನವನ್ನು ಆಚರಿಸಲಾಯಿತು. ೧೯೪೯ರಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಭಾರತೀಯ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ಸ್ವೀಕರಿಸಿದ ಐತಿಹಾಸಿಕ ದಿನದ ಸ್ಮರಣಾರ್ಥವಾಗಿ ವಿಶೇಷ ಪ್ರಾರ್ಥನಾ ಸಭೆ ಆಯೋಜಿಸಲಾಗಿತ್ತು. ಸಭೆಯು ಸಾಂಪ್ರದಾಯಿಕ ಪ್ರಾರ್ಥನೆಯೊಂದಿಗೆ ಆರಂಭಗೊAಡು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಕೆಡೆಟ್ ತನ್ವಿ ಪ್ರದಿ ಅವರು ಭಾರತೀಯ ಸೇನಾ ದಿನದ ಮಹತ್ವ ಕುರಿತು ಭಾಷಣ ಮಾಡಿ, ಸೇನೆಯ ಶೌರ್ಯ, ತ್ಯಾಗ ಮತ್ತು ರಾಷ್ಟçಸೇವೆಯನ್ನು ಸ್ಮರಿಸಿದರು. ಜೈಪುರದಲ್ಲಿ ನಡೆಯಲಿರುವ ಭಾರತೀಯ ಸೇನಾ ದಿನದ ಪೆರೇಡ್ಗೆ ಸಂಬAಧಿಸಿದ ಮಲ್ಟಿಮೀಡಿಯಾ ಪ್ರದರ್ಶನವನ್ನು ಪ್ರದರ್ಶಿಸಲಾಯಿತು. ಸೈನಿಕರ ಕಠಿಣ ಅಭ್ಯಾಸಗಳು ಹಾಗೂ ಸ್ವದೇಶಿ ತಂತ್ರಜ್ಞಾನಗಳ ಶಕ್ತಿ ಎಲ್ಲರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಕೆಡೆಟ್ಗಳು “ಕದಮ್ ಕದಮ್ ಬಢಾಯೆ ಜಾ” ಎಂಬ ದೇಶಭಕ್ತಿ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣವನ್ನು ಶಾಲೆಯ ಪ್ರಾಂಶುಪಾಲರಾದ ಡಾ. ಎಂ. ರಾಮಚಂದ್ರನ್ ಅವರು ಮಾಡಿದರು. ಅವರು ಭಾರತೀಯ ಸೇನೆಯು ಗಡಿರಕ್ಷಣೆಯೊಂದಿಗೆ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ನಾಗರಿಕರಿಗೆ ನೆರವು ನೀಡುವಲ್ಲಿ ವಹಿಸುವ ಮಹತ್ವದ ಪಾತ್ರವನ್ನು ವಿವರಿಸಿದರು. ಕಾರ್ಯಕ್ರಮವು ಕೂರ್ಗ್ ಪಿ.ಯು. ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕಿಶೋರ್ ಹಾಗೂ ಸಿಟಿಒ ಮಿಲನ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.