*ಗೋಣಿಕೊಪ್ಪ, ಮೇ ೨೫: ಭಗತ್ ಸಿಂಗ್ ಯುವಕ ಸಂಘದ ವತಿಯಿಂದ ಆಯೋಜಿಸಿದÀ ೬ನೇ ಆವೃತ್ತಿಯ ಜಿಸಿಎಲ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ದೊರೆಯಿತು. ಅತ್ತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಗತ್‌ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕಡೇಮಾಡ ಸುನಿಲ್ ಮಾದಪ್ಪ, ಗೋಣಿಕೊಪ್ಪಲು ಗ್ರಾಪಂ ಮಾಜಿ ಸದಸ್ಯ ಬಿ.ಎನ್ ಪ್ರಕಾಶ್ ಪಂದ್ಯಾಟಕ್ಕೆ ಚಾಲನೆ ನೀಡಿದರು.

ನಾಲ್ಕು ದಿನಗಳು ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು ೧೬ ತಂಡಗಳು ಭಾಗವಹಿಸಲಿವೆ. ತಾ. ೨೮ ರಂದು ಅಂತಿಮ ಪಂದ್ಯಾಟ ನಡೆಯಲಿದೆ. ವಿಜೇತ ತಂಡಗಳಿಗೆ, ಪ್ರಥಮ, ದ್ವಿತೀಯ, ತೃತೀಯ, ನಾಲ್ಕನೇ ಬಹುಮಾನವಾಗಿ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಮಾಹಿತಿ ನೀಡಿದರು.

ಈ ಸಂದರ್ಭ ಪತ್ರಕರ್ತ, ಗೋಣಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಮಾತನಾಡಿ, ಯುವಕರ ಮನಸುಗಳನ್ನು ಏಕಚಿತ್ತವಾಗಿ ಬಿಗಿಗೊಳಿಸಲು ಕ್ರೀಡೆ ಸಹಕಾರಿ, ಕಲೆ ಸಾಹಿತ್ಯ ಸಂಸ್ಕೃತಿಯ ಜೊತೆಗೆ ಕ್ರೀಡೆಯು ಮನುಷ್ಯನಿಗೆ ಅತ್ಯಗತ್ಯ ಈ ಉದ್ದೇಶದೊಂದಿಗೆ ಹಲವು ವರ್ಷಗಳ ಹಿಂದೆಯೇ ಹಿರಿಯರು ಶೈಕ್ಷಣಿಕ ಚಟುವಟಿಕೆಗಳಿಗೆ ಸ್ಥಳಗಳನ್ನು ದಾನ ಮಾಡುವಂತಹ ಸಂದರ್ಭದಲ್ಲಿ ಕ್ರೀಡೆಗೆ ಪ್ರೋತ್ಸಾಹಕವಾಗಿ ಮೈದಾನಗಳನ್ನು ನಿರ್ಮಿಸಿದ್ದಾರೆ ಎಂದು ಹೇಳಿದರು. ಗೋಣಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ ಮಾತನಾಡಿ, ಭಗತ್ ಸಿಂಗ್ ಯುವಕ ಸಂಘ ಕ್ರೀಡಾ ಚಟುವಟಿಕೆಯ ಮೂಲಕ ಯುವಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಮುಂದಾಗಿದೆ, ಈ ಕಾರ್ಯ ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಗಾ.ಪಂ. ಮಾಜಿ ಸದಸ್ಯ ಬಿ.ಎನ್. ಪ್ರಕಾಶ್ ಮಾತನಾಡಿ, ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಭಗತ್ ಸಿಂಗ್ ಯುವಕ ಸಂಘ ಕ್ರೀಡೆಯ ಮೂಲಕ ಯುವಕರಲ್ಲಿ ಆರೋಗ್ಯಪೂರ್ಣ ಬದುಕನ್ನು ಕಟ್ಟಿಕೊಡುವ ಚಿಂತನೆಯೊಳಗೆ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ ಎಂದು ಹೇಳಿದರು.

ಅತಿಥಿಗಳಾಗಿ ಪತ್ರಕರ್ತ ವಿ.ವಿ. ಅರುಣ್ ಕುಮಾರ್, ದಾನಿಗಳಾದ ಮನು ಅರ್ವತೋಕ್ಲು, ಊಂಬಾಯಿ, ಶಶಿ, ಪೂವಯ್ಯ, ಶ್ರೀನಿವಾಸ್ ಮತ್ತು ಭಗತ್ ಸಿಂಗ್ ಯುವಕ ಸಂಘದ ಉಪಾಧ್ಯಕ್ಷ ಕಣ್ಣನ್ ವೇಣು, ಕ್ರೀಡಾ ಸಂಚಾಲಕ ಸಂತೋಷ್ ಪಿಟ್ಟೆ, ಭಗತ್ ಸಿಂಗ್ ಯುವಕ ಸಂಘದ ನಿರ್ದೇಶಕರುಗಳಾದ, ಹರೀಶ್ , ಪುಷ್ಪ ಮನೋಜ್, ಸುರೇಶ್, ಎ.ಡಿ. ಮಂಜುನಾಥ್, ರವಿ ಸ್ಕಂದ, ನಿತಿನ್ ಆಳ್ವ, ಸಂಜಯ್, ರವಿ ಟಿಂಬರ್, ಅಭಿ, ವಿನ್ಯಾ ಮನೋಜ್, ಅಪ್ಪಜೋಗಿ, ಸುದಿ, ಅಕ್ಷಯ್, ಶಿವು ಮತ್ತು ೧೬ ತಂಡಗಳ ಮಾಲೀಕರು, ನಾಯಕರು, ಕ್ರೀಡಾಪಟುಗಳು ಇದ್ದರು.